ಜೆಡಿಎಸ್‌ನ ಇಬ್ಬರು ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ವೆಂಕಟ ರಾವ್‌ ನಾಡಗೌಡ ನಾಪತ್ತೆ!

ಬೆಂಗಳೂರು: ಕಾಂಗ್ರೆಸ್‌ ಬೆಂಬಲದೊಂದಿಗೆ ‘ಮೈತ್ರಿ’ ಸರ್ಕಾರ ರಚಿಸಲು ಜೆಡಿಎಸ್‌ ಕಸರತ್ತು ನಡೆಸಿದ್ದು, ಬುಧವಾರ ಕರೆದಿರುವ ಪಕ್ಷದ ಶಾಸಕಾಂಗ ಸಭೆಗೆ ಇಬ್ಬರು ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಮತ್ತು ವೆಂಕಟ ರಾವ್‌ ನಾಡಗೌಡ ಅವರು ಗೈರಾಗಿದ್ದಾರೆ.

ಇತ್ತ ಜೆಡಿಎಸ್‌ನ ವರಿಷ್ಠ ಎಚ್‌.ಡಿ. ದೇವೇಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ನಗರದ ಹೋಟೆಲ್‌ವೊಂದರಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಗೆದ್ದ ಶಾಸಕರು ಸಭೆಗೆ ದೌಡಾಯಿಸಿದ್ದಾರೆ. ಸಭೆ ಬಳಿಕ ಕುಮಾರಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿಯೂ ಘೋಷಿಸಿದೆ.

ಈ ಎಲ್ಲ ಬೆಳವಣಿಗೆ ಮಧ್ಯೆ ಇಬ್ಬರು ಶಾಸಕರು ಗೈರಾಗಿರುವುದು ಕುತೂಹಲ ಕೆರಳಿಸಿದೆ. ಇಬ್ಬರು ಶಾಸಕರು ಸಭೆಗೆ ಗೈರಾಗಿದ್ದಾರೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

ಇತ್ತ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ, ರಾಜ್ಯಪಾಲರನ್ನು ಭೇಟಿ ಮಾಡಿ ಅವಕಾಶ ಕೋರಿದೆ.  

* ಇವನ್ನೂ ಓದಿ...

ಕಾಂಗ್ರೆಸ್‌ ಕೊಚ್ಚಿ ಹೋಗಿದೆ, ಆದರೂ ವರಿಷ್ಠರ ತೀರ್ಮಾನಕ್ಕೆ ಬದ್ಧ: ಜಿ.ಟಿ. ದೇವೇಗೌಡ

ರಾಜ್ಯಪಾಲರಿಗೆ ನಾಯಕನ ಆಯ್ಕೆ ಪ್ರತಿ ಸಲ್ಲಿಸಿ, ಸರ್ಕಾರ ರಚನೆಗೆ ಅವಕಾಶ ಕೋರಿದ್ದೇವೆ: ಯಡಿಯೂರಪ್ಪ

Back to Top